ಸಿದ್ದು ಸವಾಲು ಸ್ವೀಕರಿಸಲು ಸಿದ್ಧ
ಬೆಂಗಳೂರು: ಎಲ್ಲ ಕ್ಷೇತ್ರಗಳಲ್ಲಿ ಅಭ್ಯರ್ಥಿ ಹಾಕಲಿ ಎಂಬ ಸಿದ್ದರಾಮಯ್ಯ ಸವಾಲು ಸ್ವೀಕರಿಸಲು ಸಿದ್ಧ ಎಂದು ಹೇಳಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, 14 ಕ್ಷೇತ್ರಗಳಲ್ಲಿ ಅಭ್ಯರ್ಥಿ ಕಣಕ್ಕಿಳಿಸಿ ಕಾಂಗ್ರೆಸ್ ಹಾಗೂ ಬಿಜೆಪಿಗಿಂತ ಎರಡು ಪಟ್ಟು ಹೆಚ್ಚು ಶ್ರಮ ಹಾಕುತ್ತೇನೆ ಎಂದು ಹೇಳಿದ್ದಾರೆ.
ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸುಪ್ರೀಂಕೋರ್ಟ್ ತೀರ್ಪು ಬರಲಿ ಎಂದು ನಾವು ಕಾಯುತ್ತಿದ್ದೆವು. ದೇವೇಗೌಡರ ಮಾರ್ಗದರ್ಶನದಲ್ಲಿ ಉಪ ಚುನಾವಣೆಗೆ ತಯಾರಿ ಮಾಡಿಕೊಂಡಿದ್ದೇವೆ. ಹೊಸಕೋಟೆಯಲ್ಲಿ ಶರತ್ ಬಚ್ಚೇಗೌಡರಿಗೆ ಬೆಂಬಲ ನೀಡಲು ತೀರ್ಮಾನಿಸಲಾಗಿದೆ. 14 ಕ್ಷೇತ್ರಗಳಲ್ಲಿ ಸಮರ್ಥ ಅಭ್ಯರ್ಥಿಗಳನ್ನೇ ಕಣಕ್ಕಿಳಿಸುತ್ತೇವೆ. ನಾಳೆ ಮಧ್ಯಾಹ್ನದೊಳಗೆ ಅಭ್ಯರ್ಥಿಗಳು ಫೈನಲ್ ಆಗಲಿದ್ದಾರೆ ಎಂದರು.
ಈ ಉಪ ಚುನಾವಣೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಮೂರೂ ಪಕ್ಷಗಳಿಗೂ ಅಗ್ನಿ ಪರೀಕ್ಷೆ ಯಾಗಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಜತೆ ಯಾವ ಒಳ ಅಥವಾ ಹೊರ ಒಪ್ಪಂದ ಇಲ್ಲ. ನಾನು ಮಾಡಿಕೊಳ್ಳುವುದಿದ್ದರೆ ಓಪನ್ ಒಪ್ಪಂದ ಮಾಡಿ ಕೊಳ್ಳುತ್ತೇನೆ. ಹೋರಾಟ ಮಾಡುವುದಾದರೆ ನೇರವಾಗಿಯೇ ಮಾಡುತ್ತೇನೆ ಎಂದರು.
ಸಿದ್ದು ವಿರುದ್ಧ ವಾಗ್ಧಾಳಿ: ಆರ್ಥಿಕ ತಜ್ಞರಾಗಿರುವ ಸಿದ್ದರಾಮಯ್ಯ ಅವರು ತಾನೇನೋ ಸಾಧನೆ ಮಾಡಿದ್ದೇನೆ ಎಂದು ಹೇಳಿದ್ದಾರೆ. ಅವರ ಕಾಲದಲ್ಲಿ ರೂಪಿಸಿದ ವಸತಿ ಯೋಜನೆಗಳಿಗೆ ಮುಂದಿನ ಹತ್ತು ವರ್ಷ ಆಡಳಿತ ನಡೆಸೋರು 28 ಸಾವಿರ ಕೋಟಿ ರೂ. ಹಣ ಕೊಡಬೇಕಾಗಿದೆ. ನೀರಾವರಿ ಯೋಜನೆಗಳಿಗೆ 1.3 ಲಕ್ಷ ಕೋಟಿ ಎಂದು ಘೋಷಿಸಿದ್ದಾರೆ....
ಫೋಟೋ - http://v.duta.us/AndMbQAA
ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/EyWKPwAA